Sunday, November 5, 2017

ನಸುಕಿನ ಕನವರಿಕೆಗಳು


ಬರೆದು ಮನದಟ್ಟಾಗಿಸಬೇಕು....
ಮನದ ಮರೆಯ ನೆನಪು,
ಹೃದಯದ ಆಸುಪಾಸಿನಲ್ಲಿ 
ಬೆಚ್ಚಗಿನ ಕಾವು!!!
ನೆನೆದು ಮರೆತುಬಿಡಬೇಕು....
ಕಣ್ಣಂಚಿನಲ್ಲೇ ಕುಳಿತು ಒಳಗೆ ಬಾರದ ನಿದಿರೆ!
ಬಡಬಡಿಕೆಯ ಉಸ್ತುವಾರಿಯಲ್ಲಿ
ಕಳೆದುಬಿಡುವ ಮುಂಜಾವು!!!
ಆರಾಧಿಸಿ ಸ್ತುತಿಸಬೇಕು....
ಅಲಕ್ಷಿಸಿ, ಕಡೆಗಣಿಸಿದ ಕ್ಷಣಗಳ,
ಪ್ರೀತಿಯಲ್ಲಿನ ವೈಕಲ್ಯ .... ಮತ್ತೆ
ಶರಣಾಗತಿಯಲ್ಲಿನ ಜಾಣ್ಮೆ!!!
ಪ್ರಸವವದು ಅರಿವಿರಬೇಕು....
ಕೊಲ್ಲುವ ಆ ಪ್ರಕ್ಷುಬ್ಧ ಭಾವನೆಗಳ
ಮರುಜನ್ಮಕ್ಕೆ ಕಾರಣ
ಆ ನೋಟ... ಅವನ ಕುಡಿನೋಟ !!!
ಮುಂಜಾವಿನ ಹೊತ್ತಿಗೆ
ಮುಗುದೆಯ ಚಡಪಡಿಕೆ
ಕಳೆದು ಹೋದಳೆಂದು ಊರಲ್ಲೆಲ್ಲಾ ಗುಲ್ಲು
ತನ್ನನ್ನೇ ತಾನು ಹುಡುಕಿಕೊಳ್ಳುವ ನಕಲಿ ಕನಸು!!!

- RS

4 comments:

  1. ಈ ಕವನವು ಓದುಗನ ಭಾವನೆಗಳನ್ನು ಅಲ್ಲೋಲಕಲ್ಲೋಲವಾಗಿಸುತ್ತದೆ. ಅಭಿನಂದನೆಗಳು.

    ReplyDelete
    Replies
    1. sunaath kaka.... dhanyavaada nimma abhipraayakke :)

      Delete

ಟೂರಿಸ್ಟ್ ಫ್ಯಾಮಿಲಿ ...Tourist Family, an ode to humanity & compassion :)

ಸ್ವಾರ್ಥ ಮತ್ತು ಸ್ವಲಾಭ ತುಂಬಿರುವ ಇಂದಿನ ಅಪ್ರಾಮಾಣಿಕ ವಾತಾವರಣದಲ್ಲಿ ಮಾನವೀಯತೆ ಹಾಗೂ ವಿಶ್ವಾಸವೆಂಬ ಅಸ್ತ್ರಗಳು ಧರ್ಮ, ಪ್ರದೇಶ, ಪ್ರಾಂತ್ಯ ಹಾಗೂ ಭಾಷೆಗಳನ್ನು ಮೀರಿಸ...